ಬಾಂಗ್ಲಾದೇಶದಲ್ಲಿ ಶಾಂತಿಗಾಗಿ ಪ್ರಾರ್ಥಿಸಿ ಸಂಕೀರ್ತನೆ

ಕಳೆದ ಕೆಲವು ತಿಂಗಳುಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರು ತೀವ್ರ ದೌರ್ಜನ್ಯಕ್ಕೆ ಗುರಿಯಾಗಿದ್ದಾರೆ. ದೇವಾಲಯಗಳ ಮೇಲೆ ದಾಳಿ ನಡೆದಿದೆ. ಸನಾತನ ಧರ್ಮದ ಅನುಯಾಯಿಗಳು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ.

ನೊಂದಿರುವ ಈ ಜನರಿಗೆ ರಕ್ಷಣೆಯನ್ನು ನೀಡಬೇಕೆಂದು ಒತ್ತಾಯಿಸಿ ಇಸ್ಕಾನ್‌‍ ಆಂದೋಲನವು ವಿಶ್ವಾದ್ಯಂತ ಸಂಕೀರ್ತನ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿಶ್ವ ಸಂಕೀರ್ತನೆಯು ವಿಶ್ವ ಹಿಂದೂ ಸಮುದಾಯದ ನೋವು ಮತ್ತು ದುಃಖದ ಶಾಂತಿಯುತ ಪ್ರದರ್ಶನವಾಗಿದೆ. ಅದು ಬಾಂಗ್ಲಾದೇಶದ ಹಿಂದೂಗಳ ಪರವಾಗಿ ಒಗ್ಗಟ್ಟಿನ ಪ್ರದರ್ಶನವಾಗಿದೆ.

ಬಾಂಗ್ಲಾದೇಶದಲ್ಲಿ ಕಿರುಕುಳಕ್ಕೆ ಗುರಿಯಾಗಿರುವ ಅಲ್ಪಸಂಖ್ಯಾತರ ಜೊತೆ ಒಗ್ಗಟ್ಟನ್ನು ವ್ಯಕ್ತಪಡಿಸಲು ಇಸ್ಕಾನ್‌‍ ಬೆಂಗಳೂರು ಹರೇ ಕೃಷ್ಣ ಗಿರಿಯಲ್ಲಿ ಶಾಂತಿಯುತ ಸಂಕೀರ್ತನೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಈ ಲೇಖನ ಶೇರ್ ಮಾಡಿ

Leave a Reply

Your email address will not be published. Required fields are marked *

UPI ID : bvdsstseva@sbi